Contents
Karnataka
ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್ ದೀಪ್ಕೆ ಘೋಷಣ…
Karnataka
ರಾಜ್ಯದಲ್ಲಿ ಕೋವಿಡ್ ಡೇಂಜರ್ ಇಲ್ಲ – ಆತಂಕ ಬೇಡ ಎಂದ ಸಚಿವ …
Karnataka
Web Exclusive: ಬರ ಮುಂದೆಯೂ ಬರುತ್ತದೆ; ಈಗಲೇ ಹನುಮಂತಪ್ಪ…
Karnataka
ಸಿಜೆಪಿ ಪ್ರತಿಭಟನೆಯ ಡ್ರೋನ್ ವಿಡಿಯೋ ವೈರಲ್ — ತನಿಖೆ ಆರಂಭ…
Karnataka
ಜಟಾಯು ಪಾತ್ರಕ್ಕೆ ಅನುಪಮ್ ಖೇರ್ ಎಂಟ್ರಿ; ಇಲ್ಲಿದೆ ‘ರಾಮಾಯ…
Karnataka
ಮೂವರು ಹೊಸಬರ ಎಂಟ್ರಿ: ಹೀಗಿದೆ ಟೀಮ್ ಇಂಡಿಯಾ…
Public TV
Public TV · Staff
– ಕೋವಿಡ್ ಬಗ್ಗೆ ಎಚ್ಚರ ವಹಿಸಿ ಎಂದು ಸಲಹೆ ಬೆಂಗಳೂರು: ಆಂಧ್ರದಲ್ಲಿ ಕೋವಿಡ್ಗೆ (Covid) ನಾಲ್ಕು ಮಂದಿ ಬಲಿಯಾಗಿದ್ದಾರೆ. ಆಂಧ್ರದಲ್ಲಿ ಕೋವಿಡ್ ಕೇಸ್ ಇರುವುದರಿಂದ ಕರ್ನಾಟಕದ ಜನರಿಗೆ ಆರೋಗ್ಯ ಸಚಿವರು ಮಹತ್ವದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಡೇಂಜರ್ ಇಲ್ಲ, ಆದರೆ ಎಚ್ಚರಿಕೆ ವಹಿಸಿ ಎಂದು ಸಚಿವ ಯು.ಟಿ ಖಾದರ್ (UT Khader) ಸಲಹೆ ನೀಡಿದ್ದಾರೆ. ಆಂಧ್ರಪ್ರದೇಶದಲ್ಲಿ (Andhra Pradesh) ಕೋವಿಡ್ಗೆ ನಾಲ್ಕು ಜನ…
Karnataka
ಕೊಪ್ಪಳ: ಈಗ ಎಲ್ಲಿ ನೋಡಿದರೂ, ಕೇಳಿದರೂ ಬರದ್ದೇ ಸುದ್ದಿ. ಮಳೆ ’ಬರ’ಲಿಲ್ಲ. ಕೃಷಿಗೆ ’ಬರ’ಗಾಲ. ಜಲಾಶಯಕ್ಕೆ ನೀರು ’ಬರ’ಲಿಲ್ಲ. ಹೀಗೆ ಎಲ್ಲವೂ ಬರದ್ದೇ ಬವಣೆ. ಬಾರದ ಮಳೆಗಾಗಿ, ತುಂಬದ ಜಲಾಶಯಕ್ಕಾಗಿ, ಬೇಡವಾದಾಗ ಸಿಗುವ ಗೊಬ್ಬರಕ್ಕಾಗಿಯೇ ಈಗಿನ ಅನ್ನದಾತನದ್ದು ಪಡಿಪಾಟಲು.ಕರ್ನಾಟಕದಲ್ಲಿ ಹಿಂದೆಯೂ ಅನೇಕ ಸಲ ಬರಗಾಲ ಬಂದಿತ್ತು. ಈಗಲೂ ಬಂದಿದೆ.…
✦ Lead Story · Public TV ✦
📷 PTI
ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್ ದೀಪ್ಕೆ ಘೋಷಣೆ
ನವದೆಹಲಿ: ಇಂದು ತಮ್ಮ ಪ್ರತಿಭಟನೆ(Protest) ಹಾಗೂ ಚಲೋ ಸಂಸದ್(Chalo Sansad) ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijeet Dipke) ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ…
Public TV · Special Correspondent · 21 Jul 2026 02:28 AM
ನವದೆಹಲಿ: ಇಂದು ತಮ್ಮ ಪ್ರತಿಭಟನೆ(Protest) ಹಾಗೂ ಚಲೋ ಸಂಸದ್(Chalo Sansad) ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijeet Dipke) ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ ಹಕ್ಕುಗಳಿಗಾಗಿ ಮತ್ತು ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಂಗಳವಾರವೂ ಸಂಸತ್ತಿಗೆ ಮೆರವಣಿಗೆ(Chalo Sansad) ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆ. ಮುಂದಿನ ಮೆರವಣಿಗೆ ಕುರಿತು ಸಭೆ ಇನ್ನೂ ನಡೆಯುತ್ತಿದೆ. ಮುಂದಿನ ಕ್ರಮವನ್ನು ವಿವರಿಸುವ ಅಧಿಕೃತ ಹೇಳಿಕೆಯನ್ನು ಪಕ್ಷ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಜೆಪಿ ಪ್ರತಿಭಟನೆಯ ಡ್ರೋನ್ ವಿಡಿಯೋ ವೈರಲ್ — ತನಿಖೆ ಆರಂಭಿಸಿದ ದೆಹಲಿ ಪೊಲೀಸ್ ಸೋಮವಾರದ ತೀವ್ರ ಗಲಾಟೆ ಮತ್ತು ಪೋಲಿಸರ ತೆರವು ಕಾರ್ಯಾಚರಣೆಯ ನಂತರವೂ, ಸಿಜೆಪಿ ಬೆಂಬಲಿಗರು ಹಾಗೂ ಅಭಿಜಿತ್ ದೀಪ್ಕೆ ಸೋಮವಾರ ಸಂಜೆಯ ವೇಳೆಗೆ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ʻಕಾಕ್ರೋಚ್ʼ ಕಿಚ್ಚು – 5 ಐಪಿಎಸ್ ಅಧಿಕಾರಿಗಳು ಸೇರಿ 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ; 70ಕ್ಕೂ ಹೆಚ್ಚು ಮಂದಿ ವಶಕ್ಕೆ ಸೋಮವಾರ ಪಾರ್ಲಿಮೆಂಟ್ ಸ್ಟ್ರೀಟ್ನಲ್ಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆದಿದ್ದರು. ಕೊನೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ನಡೆದಿತ್ತು. ಇದರಲ್ಲಿ ಹಲವು ಪ್ರತಿಭಟನಾಕಾರರು ಮತ್ತು ಪೊಲೀಸರು ಗಾಯಗೊಂಡಿದ್ದರು.
"
ನವದೆಹಲಿ: ಇಂದು ತಮ್ಮ ಪ್ರತಿಭಟನೆ(Protest) ಹಾಗೂ ಚಲೋ ಸಂಸದ್(Chalo Sansad) ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijeet Dipke)…
— Public TV
Karnataka
Special Correspondent
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನಾ ಮೆರವಣಿಗೆಯ ಡ್ರೋನ್ ವಿಡಿಯೋ (Drone Video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬೆನ್ನಲ್ಲೇ ಈ ಕುರಿತು ದೆಹಲಿ ಪೊಲೀಸರು ಕಾನೂನು ತನಿಖೆ ಆರಂಭಿಸಿದ್ದಾರೆ. ಸಿಜೆಪಿ ವಕ್ತಾರ ಸೌರವ್ ದಾಸ್ ಅವರು ಎಕ್ಸ್ ಖಾತೆಯಲ್ಲಿ ಸಂಸತ್ ಮಾರ್ಗ ಪ್ರದೇಶದಲ್ಲಿ ನೆರೆದಿದ್ದ ಪ್ರತಿಭಟನಾಕಾರರ ಮೇಲ್ಭಾಗದ (Aerial View) ಡ್ರೋನ್ ದೃಶ್ಯಾವಳಿಯನ್ನು ಹಂಚಿಕೊಂಡಿದ್ದರು. ಸಂಸತ್ ಭವನ, ರಾಷ್ಟ್ರಪತಿ ಭವನ ಸೇರಿದಂತೆ…
TV9 Kannada
2026ರ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’ ಕುರಿತು ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ದೆಹಲಿಯ ಭಾರತ್ ಮಂಟಪದಲ್ಲಿ ಚಿತ್ರತಂಡ ಇತ್ತೀಚೆಗೆ ‘ಪ್ರಥಮ ಸಂಕಲ್ಪ’ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಈವೆಂಟ್ನಲ್ಲಿ ಸಿನಿಮಾದ 4 ನಿಮಿಷಗಳ ಟ್ರೇಲರ್ ಪ್ರದರ್ಶಿಸಲಾಗಿದೆ. ಇದರ ಜೊತೆಗೆ ಚಿತ್ರದ ಪಾತ್ರಗಳನ್ನು ಪರಿಚಯಿಸುವ ವಿಶೇಷ ಕಾಮಿಕ್…
TV9 Kannada · Karnataka
21 Jul 2026 01:57 AM
ಭಾರತ ಮತ್ತು ಝಿಂಬಾಬ್ವೆ ನಡುವಣ ಮೂರು ಮ್ಯಾಚ್ಗಳ ಟಿ20 ಸರಣಿಯು ಜುಲೈ 23 ರಿಂದ ಶುರುವಾಗಲಿದೆ. ಈ ಸರಣಿಗಾಗಿ 15 ಸದಸ್ಯರ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ತಿಲಕ್ ವರ್ಮಾ ಅವರಿಗೆ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಿಂದ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್ ಪ್ರಭ್ಸಿಮ್ರಾನ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಮೂವರಿಗೆ ಚೊಚ್ಚಲ ಅವಕಾಶ! ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ಇತ್ತೀಚೆಗಷ್ಟೇ ಅತಿ ಕಿರಿಯ ವಯಸ್ಸಿನಲ್ಲಿ ಪಾದಾರ್ಪಣೆ…
TV9 Kannada · Karnataka
21 Jul 2026 01:52 AM
ಮುಂಬೈ, ಜುಲೈ 21: ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂವರು ಬಂದೂಕುಧಾರಿಗಳು ಬುಲೆಟ್ಪ್ರೂಫ್ ಜಾಕೆಟ್ ಧರಿಸಿ ಬಂದು ಆಭರಣದಂಗಡಿ ದರೋಡೆ(Robbery) ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆಭರಣ ಮಳಿಗೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ಗುಂಡು ನಿರೋಧಕ ಜಾಕೆಟ್ಗಳನ್ನು ಧರಿಸಿಕೊಂಡು, ಸಾರ್ವಜನಿಕರ ಮುಂಭಾಗದಲ್ಲೇ ಬಂದೂಕುಗಳನ್ನು ಝಳಪಿಸುತ್ತಾ ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸಿದ್ದಾರೆ. ಬಂದೂಕು ತೋರಿಸಿ ಪ್ಲಾಸ್ಟಿಕ್ ಚೀಲಕ್ಕೆ ಚಿನ್ನ ತುಂಬಿಕೊಂಡ ಕಳ್ಳರು ಸೋಮವಾರ ಸಂಜೆ 4.30 ರ ಸುಮಾರಿಗೆ ಪಾಲ್ಘರ್ನಲ್ಲಿರುವ ‘ಲಕ್ಷ್ಮಿ ಜ್ಯುವೆಲ್ಲರ್ಸ್’ ಮಳಿಗೆಯಲ್ಲಿ ಈ ದರೋಡೆ ನಡೆದಿದೆ. ಬೈಕ್ನಲ್ಲಿ…
TV9 Kannada · Karnataka
21 Jul 2026 01:36 AM
ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟದ ನಡುವೆ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸುಧಾರಣೆಯಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಇಂದು ಉತ್ತಮ ಹಂತದಲ್ಲಿದೆ. ನಿರಂತರ ಮಳೆ ಮತ್ತು ತಂಪಾದ ಗಾಳಿಯ ಕಾರಣದಿಂದ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನ ಇಂದಿನ AQI ಸ್ಥಿತಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 45 ರಿಂದ 55ರ ವ್ಯಾಪ್ತಿಯಲ್ಲಿ ದಾಖಲಾಗಿದೆ. ಗಾಳಿಯಲ್ಲಿ ಸೂಕ್ಷ್ಮ ಧೂಳಿನ ಕಣಗಳಾದ PM2.5 ಮಟ್ಟವು ಪ್ರತಿ ಕ್ಯೂಬಿಕ್ ಮೀಟರ್ಗೆ 6…